ಸಾರಿಗೆ ಅಧಿಕಾರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ಅಂದರ್…ಉದಯಗಿರಿ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಸಾರಿಗೆ ಅಧಿಕಾರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ಅಂದರ್…ಉದಯಗಿರಿ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಸಾರಿಗೆ ಅಧಿಕಾರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ಅಂದರ್…ಉದಯಗಿರಿ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಡಿ16,Tv10 ಕನ್ನಡ
ಕರ್ತವ್ಯ ನಿರ್ವಹಿಸಲು ಬಂದ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗೆ ಮೊಚ್ಚು ತೋರಿಸಿ ಕೊಲೆ ಬೆದರಿಕೆ ಒಡ್ಡಿದ್ದ ಮಹಿಳೆ ಹಾಗೂ ಆಕೆಯ ಪತಿಯನ್ನ ಬಂಧಿಸುವಲ್ಲಿ ಉದಯಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬನ್ನಿಮಂಟಪದ ನಿವಾಸಿಗಳಾದ ಶಫೀಕ್ ಅಹಮದ್ ಹಾಗೂ ಪತ್ನಿ ಸೈಯದ್ ಮುನೀಬುನ್ನೀಸಾ ಬಂಧಿತ ಆರೋಪಿಗಳು.ಬಂಧಿತರಿಂದ ಕಾರು ಹಾಗೂ ಮೊಚ್ಚನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಡಿಸೆಂಬರ್ 12 ರಂದು ಸಾರಿಗೆ ಅಧಿಕಾರಿ ಮರಿಗೌಡ ರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ತಲೆ ಮರೆಸಿಕೊಂಡಿದ್ದರು.ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು.ಘಟನೆ ನಡೆದ ನಾಲ್ಕು ದಿನಗಳ ನಂತರ ಆರೋಪಿಗಳು ಸೆರೆಯಾಗಿದ್ದಾರೆ.

ಉದಯಗಿರಿಯಲ್ಲಿರು ಸಾತಗಳ್ಳಿ ಬಸ್ ಸ್ಟ್ಯಾಂಡ್ ಗೆ ಸೇರಿದ ವಾಣಿಜ್ಯ ಸಂಕೀರ್ಣವನ್ನ ಷಫೀಕ್ ಅಹಮದ್ ಗೆ 12 ವರ್ಷಗಳ ಅವಧಿಗೆ ಬಾಡಿಗೆಗೆ ನೀಡಲಾಗಿತ್ತು.ನಿಗದಿತ ಸಮಯಕ್ಕೆ ಬಾಡಿಗೆ ಪಾವತಿಸದೆ ನ್ಯಾಯಾಲಯದ ಮೊರೆ ಹೋಗಿದ್ದ ಶಫೀಕ್ ಮಧ್ಯಂತರ ತಡೆಯಾಜ್ಞೆ ಪಡೆದಿದ್ದ.ನಂತರದ ದಿನಗಳಲ್ಲಿ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆಯನ್ನ ರದ್ದುಪಡಿಸಿತ್ತು.ಈ ಹಿನ್ನಲೆ ವಾಣಿಜ್ಯ ಸಂಕೀರ್ಣವನ್ನ ವಶಕ್ಕೆ ಪಡೆಯಲು ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ಸಂಚಲನಾಧಿಕಾರಿ ಮರಿಗೌಡ ರವರ ಇತರ ಅಧಿಕಾರಿಗಳ ಜೊತೆ ತೆರಳಿದ್ದ ವೇಳೆ ಇಬ್ಬರು ಮಹಿಳೆಯರ ಜೊತೆ ಬಂದ ಸೈಯದ್ ಮುನಿಬುನ್ನೀಸಾ ಮೊಚ್ಚು ತೋರಿಸಿ ಧಂಕಿ ಹಾಕಿದ್ದರು.ಮರ್ಡರ್ ಮಾಡಿ ಜೈಲಿಗೆ ಹೋಗುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದರು.ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ರವರು ಪ್ರಕರಣವನ್ನ ಭೀರವಾಗಿ ಪರಿಗಣಿಸಿದ್ದರು.ಕಾನೂನು ಸುವ್ಯವಸ್ಥೆಯ ಡಿಸಿಪಿ ಪ್ರದೀಪ್ ಘುಂಟಿ ಮಾರ್ಗದರ್ಶನದಲ್ಲಿ,ದೇವರಾಜ ಉಪವಿಭಾಹದ ಎಸಿಪಿ ಶಶಿಧರ್ ಉಸ್ತುವಾರಿಯಲ್ಲಿ ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ.ಕೆ.ರಾಜು,ಎಸ್ಸೈಗಳಾದ ಸುನಿಲ್,ರಾಜು,ರೂಪೇಶ್ ಸಿಬ್ಬಂದಿಗಳಾದ ಸಿದ್ದೀಖ್ ಅಹಮದ್,ನಾಗೇಂದ್ರಮೂರ್ತಿ,ವಿನೋದ್ ರಾಥೋಡ್,ಮಲ್ಲಿಕಾರ್ಜುನ,ನಾಜಿಯಾಬಾನು,ಸಂತೋಷ್,ಸಮೀರ್,ಶಿವರಾಜಪ್ಪ,ರವಿಕುಮಾರ್ ಹಾಗೂ ಕುಮಾರ್ ರವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.ಇಡೀ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಸೆದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *