ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಕೌಟುಂಬಿಕ ಕಲಹ…ನವವಿವಾಹಿತೆ ಕೆರೆಗೆ ಹಾರಿ ಆತ್ಮಹತ್ಯೆ…

ಹಾಸನ,ಡಿ22,Tv10 ಕನ್ನಡ
ಕೌಟುಂಬಿಕ ಕಲಹ ಹಿನ್ನಲೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಸಮುದ್ರವಳ್ಳಿ ಗ್ರಾಮದಲ್ಲಿ ನಡೆದಿದೆ.
ರೋಹಿಣಿ (23) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ.
ರೋಹಿಣಿ ಕೆ.ಆರ್.ನಗರ ತಾಲ್ಲೂಕಿನ ಪಶುಪತಿ ಗ್ರಾಮದವಳು.ಏಳು ತಿಂಗಳು ಹಿಂದೆ ಸುಮಂತ್ ಎಂಬುವವರ ಜೊತೆ ವಿವಾಹವಾಗಿತ್ತು.
ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರೈಲಿನಲ್ಲಿ ಬಂದು ಸಮುದ್ರವಳ್ಳಿ ರೈಲ್ಬೆ ಸ್ಟೇಷನ್‌ನಲ್ಲಿ ಇಳಿದು ಕೆರೆ ಬಳಿ ಬಂದಿದ್ದ ರೋಹಿಣಿ.ಕೆರೆಯ ಬಳಿ ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಬಳಿ ಕೆಲಕಾಲ ಮಾತನಾಡಿಸಿದ್ದಳು.
ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಹೇಳಿದ್ದಳು.ಎಲ್ಲರೂ ತೆರಳಿದ‌ ನಂತರ ಮೊಬೈಲ್, ಚಪ್ಪಲಿ ಬಿಟ್ಟು ನಿನ್ನೆ ಸಂಜೆ ಕೆರೆಗೆ ಹಾರಿದ್ದಾಳೆ.ರೋಹಿಣಿ ಕಾಣೆಯಾಗಿರುವ ಬಗ್ಗೆ ಕೆ.ಆರ್.ನಗರ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು.ಟವರ್ ಲೊಕೇಷನ್ ಮೂಲಕ ರೋಹಿಣಿ ಇರುವ ಸ್ಥಳ ಪತ್ತೆ ಹಚ್ಚಲಾಗಿದೆ.
ಮೊಬೈಲ್, ದುಡ್ಡು, ಚಪ್ಪಲಿ ನೋಡಿ ನಂತರ ಕೆರೆಯಲ್ಲಿ ಶೋಧ ನಡೆಸಿದ ವೇಳೆ ಶವಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು,ಏ17,Tv10 ಕನ್ನಡ ಮೈಸೂರು ವಿಶ್ವವಿದ್ಯಾನಿಲಯದ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕವಾಗಿದ್ದಾರೆ. ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ನಾಮ ನಿರ್ದೇಶಕರಾಗಿ ನೇಮಕವಾಗಿದ್ದಾರೆಂದು…
ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ…
ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮಾನಸಿಕ ಖಿನ್ನತೆ…ಯುವತಿ ಆತ್ಮಹತ್ಯೆ…ಡೆತ್ ನೋಟ್ ಬರೆದು ಸೂಸೈಡ್…

ಮೈಸೂರು,ಏ16, ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ರಾಮಕೃಷ್ಣನಗರ ಹೆಚ್ ಬ್ಲಾಕ್ ನಲ್ಲಿ ನಡೆದಿದೆ.*ನಾನು ಯಾವತ್ತೋ ಸಾಯಬೇಕಿತ್ತು,ಈಗ ಆತ್ಮಹತ್ಯೆ…

Leave a Reply

Your email address will not be published. Required fields are marked *