ವಂಚನೆಯಿಂದ ಗ್ರಾಹಕ ಪಾರಾಗಲು ಕಾನೂನು ಹಕ್ಕಿನ ಅರಿವು ಅಗತ್ಯ…ಪೊಲೀಸ್ ಇನ್ಸ್ಪೆಕ್ಟರ್ ರವೀಂದ್ರ ಸಿ ಎಂ

ವಂಚನೆಯಿಂದ ಗ್ರಾಹಕ ಪಾರಾಗಲು ಕಾನೂನು ಹಕ್ಕಿನ ಅರಿವು ಅಗತ್ಯ…ಪೊಲೀಸ್ ಇನ್ಸ್ಪೆಕ್ಟರ್ ರವೀಂದ್ರ ಸಿ ಎಂ

  • Mysore
  • December 23, 2022
  • No Comment
  • 164

ವಂಚನೆಯಿಂದ ಗ್ರಾಹಕ ಪಾರಾಗಲು ಕಾನೂನು ಹಕ್ಕಿನ ಅರಿವು ಅಗತ್ಯ…ಪೊಲೀಸ್ ಇನ್ಸ್ಪೆಕ್ಟರ್ ರವೀಂದ್ರ ಸಿ ಎಂ

ಮೈಸೂರು,ಡಿ23,Tv10 ಕನ್ನಡ
ಪ್ರತಿಯೊಬ್ಬ ಗ್ರಾಹಕನು ಸಹ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಹೊಂದಿದಾಗ ಮಾತ್ರ ವಂಚನೆ ಎಂಬ ಸುಳಿಯಿಂದ ಹೊರಬರಲು ಸಾಧ್ಯ ಎಂದು ಸರಸ್ವತಿಪುರಂ ಪೊಲೀಸ್ ಠಾಣೆ ನಿರೀಕ್ಷಕರಾದ ರವೀಂದ್ರ ಸಿ ಎಂ ಅಭಿಪ್ರಾಯಪಟ್ಟಿದ್ದಾರೆ.
ಸರಸ್ವತಿಪುರಂನಲ್ಲಿರುವ ಟಿ.ಟಿ.ಎಲ್ ಕಾಲೇಜ್ ಆವರಣದಲ್ಲಿ ಟಿ.ಟಿ.ಎಲ್ ಟ್ರಸ್ಟ್ ಮತ್ತು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಟಿ.ಟಿ.ಎಲ್ ವಾಣಿಜ್ಯ ವ್ಯವಹಾರ ನಿರ್ವಹಣಾ ಕಾಲೇಜು ಮತ್ತು ಟಿ .ಟಿ. ಎಲ್ ಸ್ವಾತಂತ್ರ್ಯ ಪದವಿ ಪೂರ್ವ ಕಾಲೇಜು
ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ’ ಅಂಗವಾಗಿ ಗ್ರಾಹಕ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಪ್ರತಿಯೊಬ್ಬ ಗ್ರಾಹಕರ ರಕ್ಷಣೆಯನ್ನು ಹಿತದೃಷ್ಟಿಯಲ್ಲಿಟ್ಟು ಕೊಂಡು 1984ರಲ್ಲಿ ಗ್ರಾಹಕ ಕಾಯಿದೆ ಜಾರಿಗೆ ತಂದಿದೆ. ಪ್ರತಿಯೊಬ್ಬ ಗ್ರಾಹಕನು ವಸ್ತು ಮತ್ತು ಸೇವೆಗಳನ್ನು ನೋಂದಾಯಿತ ವ್ಯಕ್ತಿ ಅಥವಾ ಸಂಸ್ಥೆಯಿಂದ ಪಡೆಯಬೇಕು.ಅನ್ಯಾಯ ಕಂಡು ಬಂದಲ್ಲಿ ಕಾನೂನಾತ್ಮಕವಾಗಿ ಕನ್ಸ್ಯೂಮರ್ ಕೋರ್ಟ್ ಗೆ ತೆರಳಿ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಸಲಹೆ ನೀಡಿದರು. ಪ್ರತಿಯೊಬ್ಬ ನಾಗರೀಕ ಸಮಾಜದಲ್ಲಿ ತನಗೆ ಬೇಕಾದ ಮಾಹಿತಿ ಪಡೆಯಲು ಮತ್ತು ಪ್ರಶ್ನೆ ಕೇಳಲು ಸ್ವಾತಂತ್ರವಿದೆ. ಕಾನೂನಾತ್ಮಕವಾಗಿ ಮಾಹಿತಿ ಹಕ್ಕಿನಲ್ಲಿದೆ ಆದರೆ ಅದನ್ನ ಕೆಲವರು ಸ್ವತಃ ಆರ್.ಟಿ.ಐ ಕಾರ್ಯಕರ್ತ ಎಂದು ವೈಭವಿಕರಿಸುವುದು ಸರಿಯಲ್ಲ, ಸೈಬರ್‌ ಅಪರಾಧಗಳಿಂದ ಎಚ್ಚರ ವಹಿಸಿ’ ಅನಾಮಧೇಯ ವ್ಯಕ್ತಿಗಳು ಮೊಬೈಲ್‌ಗೆ ಕರೆ ಮಾಡಿ ಓಟಿಪಿ ಹಾಗೂ ಇತರೆ ಸಂದೇಶಗಳನ್ನು ಕಳಿಸಿ ಬ್ಯಾಂಕ್‌ ಖಾತೆಯಿಂದ ಹಣ ದೋಚುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಸಾರ್ವಜನಿಕರು ಅನಾಮಧೇಯ ಕರೆ ಹಾಗೂ ಸಂದೇಶಗಳಿಂದ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು.
ಮಹಿಳೆಯರು ಆಭರಣ ಧರಿಸಿ ತಿರುಗಾಡುವಾಗ ಜಾಗೃತಿಯಿಂದಿರಬೇಕು. ಪ್ರತಿಯೊಬ್ಬರು ಮೋಟಾರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನ ಪಾಲಿಸಬೇಕು, ಜೀವ ಉಳಿಸಿಕೊಳ್ಳಲು ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಟಿ.ಟಿ.ಎಲ್ ಟ್ರಸ್ಟ್ ಆಡಳಿತ ಮತ್ತು ನಿಯೋಜನ ಅಧಿಕಾರಿ ಡಾಕ್ಟರ್ ಬಿ ವಿ ಪ್ರಶಾಂತ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಅಧ್ಯಕ್ಷರಾದ ಡಾ. ಜಿ ವಿ ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸಾಮಾಜಿಕ ಹೋರಾಟಗಾರ ಅಜಯ್ ಶಾಸ್ತ್ರಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಎಸ್.ಆರ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಭ್ರಮರಾಂಬ ಎಸ್, ಡಾ. ಗೀತಾ, ಕಾಲೇಜಿನ ರೆಡ್ ಕ್ರಾಸ್ ಅಧಿಕಾರಿ ಗಿರೀಶ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *