ವಂಚನೆಯಿಂದ ಗ್ರಾಹಕ ಪಾರಾಗಲು ಕಾನೂನು ಹಕ್ಕಿನ ಅರಿವು ಅಗತ್ಯ…ಪೊಲೀಸ್ ಇನ್ಸ್ಪೆಕ್ಟರ್ ರವೀಂದ್ರ ಸಿ ಎಂ

ವಂಚನೆಯಿಂದ ಗ್ರಾಹಕ ಪಾರಾಗಲು ಕಾನೂನು ಹಕ್ಕಿನ ಅರಿವು ಅಗತ್ಯ…ಪೊಲೀಸ್ ಇನ್ಸ್ಪೆಕ್ಟರ್ ರವೀಂದ್ರ ಸಿ ಎಂ

  • Mysore
  • December 23, 2022
  • No Comment
  • 185

ವಂಚನೆಯಿಂದ ಗ್ರಾಹಕ ಪಾರಾಗಲು ಕಾನೂನು ಹಕ್ಕಿನ ಅರಿವು ಅಗತ್ಯ…ಪೊಲೀಸ್ ಇನ್ಸ್ಪೆಕ್ಟರ್ ರವೀಂದ್ರ ಸಿ ಎಂ

ಮೈಸೂರು,ಡಿ23,Tv10 ಕನ್ನಡ
ಪ್ರತಿಯೊಬ್ಬ ಗ್ರಾಹಕನು ಸಹ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಹೊಂದಿದಾಗ ಮಾತ್ರ ವಂಚನೆ ಎಂಬ ಸುಳಿಯಿಂದ ಹೊರಬರಲು ಸಾಧ್ಯ ಎಂದು ಸರಸ್ವತಿಪುರಂ ಪೊಲೀಸ್ ಠಾಣೆ ನಿರೀಕ್ಷಕರಾದ ರವೀಂದ್ರ ಸಿ ಎಂ ಅಭಿಪ್ರಾಯಪಟ್ಟಿದ್ದಾರೆ.
ಸರಸ್ವತಿಪುರಂನಲ್ಲಿರುವ ಟಿ.ಟಿ.ಎಲ್ ಕಾಲೇಜ್ ಆವರಣದಲ್ಲಿ ಟಿ.ಟಿ.ಎಲ್ ಟ್ರಸ್ಟ್ ಮತ್ತು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಟಿ.ಟಿ.ಎಲ್ ವಾಣಿಜ್ಯ ವ್ಯವಹಾರ ನಿರ್ವಹಣಾ ಕಾಲೇಜು ಮತ್ತು ಟಿ .ಟಿ. ಎಲ್ ಸ್ವಾತಂತ್ರ್ಯ ಪದವಿ ಪೂರ್ವ ಕಾಲೇಜು
ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ’ ಅಂಗವಾಗಿ ಗ್ರಾಹಕ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಪ್ರತಿಯೊಬ್ಬ ಗ್ರಾಹಕರ ರಕ್ಷಣೆಯನ್ನು ಹಿತದೃಷ್ಟಿಯಲ್ಲಿಟ್ಟು ಕೊಂಡು 1984ರಲ್ಲಿ ಗ್ರಾಹಕ ಕಾಯಿದೆ ಜಾರಿಗೆ ತಂದಿದೆ. ಪ್ರತಿಯೊಬ್ಬ ಗ್ರಾಹಕನು ವಸ್ತು ಮತ್ತು ಸೇವೆಗಳನ್ನು ನೋಂದಾಯಿತ ವ್ಯಕ್ತಿ ಅಥವಾ ಸಂಸ್ಥೆಯಿಂದ ಪಡೆಯಬೇಕು.ಅನ್ಯಾಯ ಕಂಡು ಬಂದಲ್ಲಿ ಕಾನೂನಾತ್ಮಕವಾಗಿ ಕನ್ಸ್ಯೂಮರ್ ಕೋರ್ಟ್ ಗೆ ತೆರಳಿ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಸಲಹೆ ನೀಡಿದರು. ಪ್ರತಿಯೊಬ್ಬ ನಾಗರೀಕ ಸಮಾಜದಲ್ಲಿ ತನಗೆ ಬೇಕಾದ ಮಾಹಿತಿ ಪಡೆಯಲು ಮತ್ತು ಪ್ರಶ್ನೆ ಕೇಳಲು ಸ್ವಾತಂತ್ರವಿದೆ. ಕಾನೂನಾತ್ಮಕವಾಗಿ ಮಾಹಿತಿ ಹಕ್ಕಿನಲ್ಲಿದೆ ಆದರೆ ಅದನ್ನ ಕೆಲವರು ಸ್ವತಃ ಆರ್.ಟಿ.ಐ ಕಾರ್ಯಕರ್ತ ಎಂದು ವೈಭವಿಕರಿಸುವುದು ಸರಿಯಲ್ಲ, ಸೈಬರ್‌ ಅಪರಾಧಗಳಿಂದ ಎಚ್ಚರ ವಹಿಸಿ’ ಅನಾಮಧೇಯ ವ್ಯಕ್ತಿಗಳು ಮೊಬೈಲ್‌ಗೆ ಕರೆ ಮಾಡಿ ಓಟಿಪಿ ಹಾಗೂ ಇತರೆ ಸಂದೇಶಗಳನ್ನು ಕಳಿಸಿ ಬ್ಯಾಂಕ್‌ ಖಾತೆಯಿಂದ ಹಣ ದೋಚುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಸಾರ್ವಜನಿಕರು ಅನಾಮಧೇಯ ಕರೆ ಹಾಗೂ ಸಂದೇಶಗಳಿಂದ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು.
ಮಹಿಳೆಯರು ಆಭರಣ ಧರಿಸಿ ತಿರುಗಾಡುವಾಗ ಜಾಗೃತಿಯಿಂದಿರಬೇಕು. ಪ್ರತಿಯೊಬ್ಬರು ಮೋಟಾರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನ ಪಾಲಿಸಬೇಕು, ಜೀವ ಉಳಿಸಿಕೊಳ್ಳಲು ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಟಿ.ಟಿ.ಎಲ್ ಟ್ರಸ್ಟ್ ಆಡಳಿತ ಮತ್ತು ನಿಯೋಜನ ಅಧಿಕಾರಿ ಡಾಕ್ಟರ್ ಬಿ ವಿ ಪ್ರಶಾಂತ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಅಧ್ಯಕ್ಷರಾದ ಡಾ. ಜಿ ವಿ ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸಾಮಾಜಿಕ ಹೋರಾಟಗಾರ ಅಜಯ್ ಶಾಸ್ತ್ರಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಎಸ್.ಆರ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಭ್ರಮರಾಂಬ ಎಸ್, ಡಾ. ಗೀತಾ, ಕಾಲೇಜಿನ ರೆಡ್ ಕ್ರಾಸ್ ಅಧಿಕಾರಿ ಗಿರೀಶ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *