IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ…

Tv10 ಕನ್ನಡ
ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಎರಡನೇ ಟೆಸ್ಟ್ ರೋಮಾಂಚನಕಾರಿಯಾಗಿ ಕೊನೆಗೊಂಡಿದೆ.ತೂಗುಯ್ಯಾಲಯಂತಾಡಿದ ವಿಜಯಲಕ್ಷ್ಮಿ ಕೊನೆಗೂ ಭಾರತಕ್ಕೆ ಒಲಿದಿದ್ದಾಳೆ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ರವರ ದಿಟ್ಟ ಹೋರಾಟಕ್ಕೆ ಫಲ ದೊರೆತಿದೆ.ಏಳನೇ ವಿಕೆಟ್ ಗೆ ಇಬ್ಬರ ನಡುವೆ 70 ರನ್ ಗಳ ಜೊತೆಯಾಟ ಭಾರತಕ್ಕೆ ಗೆಲುವಿನ ನಗೆ ಬೀರಲು ಸಹಕಾರಿಯಾಗಿದೆ.ಇಬ್ಬರ ಜುಗಲ್ ಬಂಧಿ ಆಟ ಎರಡು ಟೆಸ್ಟ್ ಗಳ ಸರಣಿ ಸ್ವೀಪ್ ಮಾಡಿದಂತಾಗಿದೆ.ಬಾಂಗ್ಲಾ ದೇಶದ ಸ್ಪಿನ್ನರ್ ಮೆಹಿದಿ ಹಸನ್ ರವರ ದಾಳಿಗೆ ನಲುಗಿದ್ದ ಭಾರತ ಕೊನೆಗೂ ಗೆಲುವಿನ ದಡ ಮುಟ್ಟಿದೆ.

ನಾಲ್ಕನೇ ದಿನವಾದ ಇಂದು ಆಟ ಮುಂದುವರೆಸಿದ ಭಾರತ ಆರಂಭದಲ್ಲೇ ಅಘಾತಕ್ಕೆ ಸಿಲುಕಿತು.ಗೆಲುವಿಗೆ ಇನ್ನೂ 99 ರನ್ ಗಳ ಅವಶ್ಯಕತೆವಿರುವಾಗಲೇ ಅಕ್ಷರ್ ಪಟೇಲ್,ಉನಾದ್ ಕಟ್ ವಿಕೆಟ್ ಕಳೆದುಕೊಂಡಿತು.ಮೊದಲ ಇನ್ನಂಗ್ಸ್ ಹೀರೋ ರಿಷಬ್ ಪಂತ್ ಹೆಚ್ಚುಹೊತ್ತು ಸ್ಕ್ರೀಸ್ ನಲ್ಲಿ ನಿಲ್ಲದೆ ಕೇವಲ 9 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಗೆಲುವಿಗೆ ಇನ್ನೂ 70 ರನ್ ಗಳ ಅವಶ್ಯಕತೆ ಇತ್ತು.ಈ ವೇಳೆ ಒಂದಾದ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ಮುರಿಯದ 7 ನೇ ವಿಕೆಟ್ ಗೆ 70 ರನ್ ಗಳನ್ನ ಪೇರಿಸಿ ಗೆಲುವಿನ ಸಂಭ್ರಮ ತಂದಿತ್ತರು.ಎರಡೂ ಇನ್ನಿಂಗ್ಸ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ರವಿಚಂದ್ರನ್ ಅಶ್ವಿನ್ ಪಂದ್ಯದ ಪುರುಶೋತ್ತಮ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್ ವಿವರ
ಬಾಂಗ್ಲಾ ಮೊದಲ ಇನ್ನಿಂಗ್ಸ್ 227 ಎರಡನೇ ಇನ್ನಿಂಗ್ಸ್ 231

ಭಾರತ ಮೊದಲ ಇನ್ನಿಂಗ್ಸ್ 314 ಎರಡನೇ ಇನ್ನಿಂಗ್ಸ್ 145/7

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *