ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಮೈಸೂರು,ಡಿ26,Tv10 ಕನ್ನಡ
ಪೌತಿ ಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ.

ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಮೈಸೂರು ಹಾಗೂ ಕೃಷಿಕ ಸಮಾಜ ಮೈಸೂರು. ಸಹಯೋಗದಲ್ಲಿ ನಾಗೇನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ ಅಂಗವಾಗಿ ರೈತ ಮತ್ತು ವಿಜ್ಞಾನಿಗಳ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಮೀನಿನ ಅನುಭವದಲ್ಲಿ ಇದ್ದರು ಜಮೀನಿನ ಹಕ್ಕು ಪತ್ರ ಪಡೆಯಲು ಸಾಕಷ್ಟು ಜನರಿಗೆ ಸಾಧ್ಯವಾಗಿಲ್ಲ, ಯಾವುದೇ ರೀತಿಯ ನಕ್ಷೆಗಳು ಇಲ್ಲದೆ ರೈತರು ಉಳುಮೆ ಮಾಡುತಿದ್ದರೂ ಈ ಸಂಬಂಧ ಅವರು ಕಚೇರಿಗೆ ಬಂದು ಹಕ್ಕು ಪತ್ರಗಳನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಪೌತಿ ಖಾತೆ ಪಡೆಯು ಬಗ್ಗೆ ಮಹಿಳೆಯರು ಹಿಂಜರಿಯದೆ ಮುಂದೆ ಬಂದು ತಮ್ಮ ಹಕ್ಕುಗಳನ್ನು ಪಡೆದುಕೊಳಬೇಕು, ಈ ಸಂಬಂಧ ರೈತರಿಗೆ ಪೌತಿ ಖಾತೆಗಳ ಬಗ್ಗೆ ಅರಿವು ಅವಶ್ಯಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಕೃಷಿ ಇಲಾಖೆಯಲ್ಲಿ ರೈತರಿಗೆ ಅನೇಕ ಯೋಜನೆಗಳಿವೆ, ರೈತರು ಯೋಜನೆಗಳ ಬಗ್ಗೆ ತಿಳಿದು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಬಿ.ಆರ್.ಪೂರ್ಣಿಮಾ ಅವರು ಮಾತನಾಡಿ ನರೇಗಾ ಯೋಜನೆ ರೈತರಿಗೆ ವರದಾನವಾಗಿದ್ದು ನರೇಗಾ ಯೋಜನೆಯ ಸದುಪಯೋಗಮಾಡಿಕೊಳ್ಳಲು ರೈತರು ಮುಂದಾಗಬೇಕು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಆತ್ಮ ಯೋಜನೆಯಡಿ 2021-22ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ ಕೃಷಿ ಪಂಡಿತ ಹಾಗೂ ಉದಯೋನ್ಮುಖ ಕೃಷಿ ಪ್ರಶಸ್ತಿ ಪಡೆದ ಜಿಲ್ಲೆಯ ರೈತರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕರಾದ ಚಂದ್ರ ಶೇಖರ್, ತೋಟಗಾರಿಕೆ ಉಪ ನಿರ್ದೇಶಕರಾದ ರುದ್ರೇಶ್ , ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಲಪುರ ನಾಗೇಂದ್ರ, ರೈತ ಮುಖಂಡರಾದ ಹೊಸೂರ್ ಕುಮಾರ್, ವಿದ್ಯಾಸಾಗರ್ , ಕಿರಗಸೂರು ಶಂಕರ್ , ಕೃಷಿಕ ಸಮಾಜ ಅಧ್ಯಕ್ಷರಾದ ಕಲ್ಮಳ್ಳಿ ಶಿವಕುಮಾರ್ ಹಾಗೂ ಎಲ್ಲಾ ತಾಲ್ಲೂಕಿನ ರೈತರು ಉಪಸ್ಥಿತರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *