ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಮೈಸೂರು,ಡಿ26,Tv10 ಕನ್ನಡ
ಪೌತಿ ಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ.

ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಮೈಸೂರು ಹಾಗೂ ಕೃಷಿಕ ಸಮಾಜ ಮೈಸೂರು. ಸಹಯೋಗದಲ್ಲಿ ನಾಗೇನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ ಅಂಗವಾಗಿ ರೈತ ಮತ್ತು ವಿಜ್ಞಾನಿಗಳ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಮೀನಿನ ಅನುಭವದಲ್ಲಿ ಇದ್ದರು ಜಮೀನಿನ ಹಕ್ಕು ಪತ್ರ ಪಡೆಯಲು ಸಾಕಷ್ಟು ಜನರಿಗೆ ಸಾಧ್ಯವಾಗಿಲ್ಲ, ಯಾವುದೇ ರೀತಿಯ ನಕ್ಷೆಗಳು ಇಲ್ಲದೆ ರೈತರು ಉಳುಮೆ ಮಾಡುತಿದ್ದರೂ ಈ ಸಂಬಂಧ ಅವರು ಕಚೇರಿಗೆ ಬಂದು ಹಕ್ಕು ಪತ್ರಗಳನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಪೌತಿ ಖಾತೆ ಪಡೆಯು ಬಗ್ಗೆ ಮಹಿಳೆಯರು ಹಿಂಜರಿಯದೆ ಮುಂದೆ ಬಂದು ತಮ್ಮ ಹಕ್ಕುಗಳನ್ನು ಪಡೆದುಕೊಳಬೇಕು, ಈ ಸಂಬಂಧ ರೈತರಿಗೆ ಪೌತಿ ಖಾತೆಗಳ ಬಗ್ಗೆ ಅರಿವು ಅವಶ್ಯಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಕೃಷಿ ಇಲಾಖೆಯಲ್ಲಿ ರೈತರಿಗೆ ಅನೇಕ ಯೋಜನೆಗಳಿವೆ, ರೈತರು ಯೋಜನೆಗಳ ಬಗ್ಗೆ ತಿಳಿದು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಬಿ.ಆರ್.ಪೂರ್ಣಿಮಾ ಅವರು ಮಾತನಾಡಿ ನರೇಗಾ ಯೋಜನೆ ರೈತರಿಗೆ ವರದಾನವಾಗಿದ್ದು ನರೇಗಾ ಯೋಜನೆಯ ಸದುಪಯೋಗಮಾಡಿಕೊಳ್ಳಲು ರೈತರು ಮುಂದಾಗಬೇಕು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಆತ್ಮ ಯೋಜನೆಯಡಿ 2021-22ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ ಕೃಷಿ ಪಂಡಿತ ಹಾಗೂ ಉದಯೋನ್ಮುಖ ಕೃಷಿ ಪ್ರಶಸ್ತಿ ಪಡೆದ ಜಿಲ್ಲೆಯ ರೈತರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕರಾದ ಚಂದ್ರ ಶೇಖರ್, ತೋಟಗಾರಿಕೆ ಉಪ ನಿರ್ದೇಶಕರಾದ ರುದ್ರೇಶ್ , ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಲಪುರ ನಾಗೇಂದ್ರ, ರೈತ ಮುಖಂಡರಾದ ಹೊಸೂರ್ ಕುಮಾರ್, ವಿದ್ಯಾಸಾಗರ್ , ಕಿರಗಸೂರು ಶಂಕರ್ , ಕೃಷಿಕ ಸಮಾಜ ಅಧ್ಯಕ್ಷರಾದ ಕಲ್ಮಳ್ಳಿ ಶಿವಕುಮಾರ್ ಹಾಗೂ ಎಲ್ಲಾ ತಾಲ್ಲೂಕಿನ ರೈತರು ಉಪಸ್ಥಿತರಿದ್ದರು…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *