ಹೊಸ ವರ್ಷಕ್ಕೆ 2 ಲಕ್ಷ ಲಡ್ಡು ವಿತರಿಸಲು ಸಿದ್ದತೆ…ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಯಾರಿ…ಮೈಸೂರು,ಡಿ29,Tv10 ಕನ್ನಡ

ಹೊಸ ವರ್ಷಕ್ಕೆ 2 ಲಕ್ಷ ಲಡ್ಡು ವಿತರಿಸಲು ಸಿದ್ದತೆ…ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಯಾರಿ…

ಮೈಸೂರು,ಡಿ29,Tv10 ಕನ್ನಡ

ಹೊಸ ವರ್ಷಕ್ಕೆ 2 ಲಕ್ಷ ಲಡ್ಡು ವಿತರಿಸಲು ಸಿದ್ದತೆ…ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಯಾರಿ…

ಮೈಸೂರು,ಡಿ29,Tv10 ಕನ್ನಡ

ಹೊಸ ವರ್ಷಕ್ಕೆ ಭಕ್ತಾದಿಗಳಿಗೆ 2 ಲಕ್ಷ ಲಡ್ಡು ವಿತರಿಸಲು ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಸಿದ್ದತೆ ಭರದಿಂದ ಸಾಗಿದೆ.ದೇವಸ್ಥಾನದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ನೇತೃತ್ವದಲ್ಲಿ ಸಿದ್ದತಾ ಕಾರ್ಯ ನೆರವೇರುತ್ತಿದೆ.ಸುಮಾರು 30 ಕ್ಕೂ ಹೆಚ್ಚು ಬಾಣಸಿಗರು ಸಿದ್ದತಾ ಕಾರ್ಯದಲ್ಲಿ ತೊಡಗಿದ್ದಾರೆ.1994 ರಲ್ಲಿ ಒಂದು ಸಾವಿರ ಲಡ್ಡು ವಿತರಣೆಯಿಂದ ಪ್ರಾರಂಭವಾದ ಈ ಕೈಂಕರ್ಯ ಇಂದು 2 ಲಕ್ಷ ಲಡ್ಡು ವಿತರಿಸುವ ಹಂತಕ್ಕೆ ಮುಟ್ಟಿದೆ.ಬೆಳಿಗ್ಗೆ ಸುಮಾರು 5 ಗಂಟೆಯಿಂದ ಪ್ರಸಾದ ವಿತರಣೆ ಆರಂಭವಾಗಲಿದೆ.2 ಕೆಜಿ ತೂಕದ 10 ಸಾವಿರ ಲಡ್ಡುಗಳು,150 ಗ್ರಾಂ ತೂಕದ ಎರಡು ಲಕ್ಷ ಲಡ್ಡುಗಳು ತಯಾರಾಗುತ್ತಿದೆ.

ಲಡ್ಡು ತಯಾರಿಕೆಗೆ 75 ಕ್ವಿಂಟಾಲ್ ಕಡ್ಲೆಹಿಟ್ಟು,200 ಕೆಜಿ ಸಕ್ಕರೆ,6000 ಲೀಟರ್ ಖಾದ್ಯ ತೈಲ,200 ಕೆಜಿ ಗೋಡಂಬಿ,200 ಕೆಜಿ ಒಣದ್ರಾಕ್ಷಿ,100 ಕೆಜಿ ಬಾದಾಮಿ,500 ಕೆಜಿ ಡೈಮಂಡ್ ಸಕ್ಕರೆ,1000 ಕೆಜಿ ಬೂರಾ ಸಕ್ಕರೆ,20 ಕೆಜಿ ಪಿಸ್ತಾ,50 ಕೆಜಿ ಏಲಕ್ಕಿ,10 ಕೆಜಿ ಪಚ್ಚ ಕರ್ಪೂರ,100 ಕೆಜಿ ಲವಂಗ ಬಳಸಲಾಗಿದೆ.ಜನವರಿ 1 ರ ಮುಂಜಾನೆ ದೇವರಿಗೆ ವಿಶೇಷ ಪೂಜೆ ನೆರವೇರಿದ ನಂತರ ಲಡ್ಡು ವಿತರಣೆಯಾಗಲಿದೆ.ರಾತ್ರಿ 10 ಗಂಟೆ ವರೆಗೂ ಪ್ರಸಾದ ವಿತರಿಸಲಾಗುತ್ತದೆ.

ನಾಲ್ಕನೇ ಅಲೆ ಭೀತಿ ಇರಯವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಭಕ್ತರಿಗೆ ಭಾಷ್ಯಂ ಸ್ವಾಮೀಜಿ ರವರು ಮನವಿ ಮಾಡಿದ್ದಾರೆ.ಆಡಳಿತಾಧಿಕಾರಿ ಶ್ರೀನಿವಾಸ್ ಉಸ್ತುವಾರಿಯಲ್ಲಿ ಲಡ್ಡು ತಯಾರಿಕಾ ನಿರ್ವಹಣೆ ಸಾಗುತ್ತಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *