ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಪತ್ನಿಗೆ ಮೆಸೇಜ್ ಮಾಡಿದ ಸ್ನೇಹಿತ ಮಟ್ಯಾಷ್…24 ಗಂಟೆಯಲ್ಲಿ ಆರೋಪಿ ಅಂದರ್…

ಮೈಸೂರು,ಜ2,Tv10 ಕನ್ನಡ
ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡಿ ಕೊಲೆಯಾದ ಪ್ರಕರಣದ ಆರೋಪಿಯನ್ನ 24 ಗಂಟೆ ಒಳಗೆ ಬಂಧಿಸುವಲ್ಲಿ ವಿಜಯನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಲೋಕೇಶ್ ಬಂಧಿತ ಆರೋಪಿ.ದರ್ಶನ್ ಸ್ನೇಹಿತನಿಂದಲೇ ಕೊಲೆಯಾದ ದುರ್ದೈವಿ.

ಕೊಲೆಯಾದ ದರ್ಶನ್ ಹಾಗೂ ಆರೋಪಿ ಲೋಕೇಶ್ ಸ್ನೇಹಿತರು.ಮೈಸೂರಿನ ಕೂರ್ಗಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದರು.ಎರಡನೇ ಮದುವೆಯಾಗಿದ್ದ ಲೋಕೇಶ್ ಸಂಸಾರ ಸಮೇತ ಮನೆಯಲ್ಲಿದ್ದ.ಸ್ನೇಹಿತನ ಪತ್ನಿಯ ಮೇಲೆ ಕಣ್ಣುಹಾಕಿದ್ದ ದರ್ಶನ್ ಆಗಾಗ ಮೆಸೇಜ್ ಮಾಡಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ.ಈ ಹಿನ್ನಲೆ ದರ್ಶನ್ ಮೇಲೆ ದ್ವೇಷ ಬೆಳೆಸಿಕೊಂಡ ಲೋಕೇಶ್ ಚಾಕುವಿನಿಂದ ಇರಿದಿದ್ದ.ಆಸ್ಪತ್ರೆಗೆ ದಾಖಲಾಗಿದ್ದ ದರ್ಶನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಕೃತ್ಯ ನಡೆದ 24 ಗಂಟೆ ಒಳಗೆ ವಿಜಯನಗರ ಠಾಣಾ ಪೊಲೀಸರು ಆರೋಪಿ ಲೋಕೇಶ್ ನನ್ನು ಕೆ.ಆರ್.ನಗರದಲ್ಲಿ ಬಂಧಿಸಿದ್ದಾರೆ.ವಿಚಾರಣೆ ವೇಳೆ ತನ್ನ ಎರಡನೇ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಕಾರಣ ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ.

ಡಿಸಿಪಿ ಮುತ್ತುರಾಜ್,ಎಸಿಪಿ ಶಿವಶಂಕರ್ ಮಾರ್ಗದರ್ಶನದಲ್ಲಿ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿಶಂಕರ್ ನೇತೃತ್ವದಲ್ಕಿ ಪಿಎಸ್ಸೈ ಗಳಾದ ಶಬರೀಶ್,ನಾರಾಯಣ್ ಸಿಬ್ಬಂದಿಗಳಾದ ಶಂಕರ್,ಮುರಳೀಧರ್,ಲೋಕೇಶ್,ಪ್ರಭಾಕರ್,ಸೋಮಾರಾಧ್ಯ,ಮೆಹಬೂಬ್ ಪಾಷ,ಶಿವಕುಮಾರ್,ಶ್ರೀನಿವಾಸ್ ಮೂರ್ತಿ,ಅಣ್ಣಪ್ಪ ದೇವಾಡಿಗ ಹಾಗೂ ಕಾಮಣ್ಣ ರವರು ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *