ಸ್ಕೂಟರ್ ಟ್ರೈನಿಂಗ್ ನೆಪದಲ್ಲಿ ಕೈಚಳಕ…ಟ್ರೈನರ್,ಬ್ಯೂಟಿಷಿಯನ್ ಸೇರಿದಂತೆ ಮೂವರು ಕತರ್ ನಾಕ್ ಕಳ್ಳಿಯರ ಬಂಧನ…7.5 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸ್ಕೂಟರ್ ಟ್ರೈನಿಂಗ್ ನೆಪದಲ್ಲಿ ಕೈಚಳಕ…ಟ್ರೈನರ್,ಬ್ಯೂಟಿಷಿಯನ್ ಸೇರಿದಂತೆ ಮೂವರು ಕತರ್ ನಾಕ್ ಕಳ್ಳಿಯರ ಬಂಧನ…7.5 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸ್ಕೂಟರ್ ಟ್ರೈನಿಂಗ್ ನೆಪದಲ್ಲಿ ಕೈಚಳಕ…ಟ್ರೈನರ್,ಬ್ಯೂಟಿಷಿಯನ್ ಸೇರಿದಂತೆ ಮೂವರು ಕತರ್ ನಾಕ್ ಕಳ್ಳಿಯರ ಬಂಧನ…7.5 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಜ3,Tv10 ಕನ್ನಡ
ಸ್ಕೂಟರ್ ರೈಡಿಂಗ್ ತರಬೇತಿ ನೀಡುವ ನೆಪದಲ್ಲಿ ಚಿನ್ನಾಭರಣ ದೋಚಿದ ಮೂವರು ಖತರ್ ನಾಕ್ ಕಳ್ಳಿಯರು ಮೈಸೂರು ಕುವೆಂಪುನಗರ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 7.5 ಲಕ್ಷ ಮೌಲ್ಯದ 150 ಗ್ರಾಂ ಚಿನ್ನಾಭರಣ,12 ಸಾವಿರ ನಗದು,ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೂರು ಮೊಬೈಲ್ ಗಳನ್ನ ವಶಪಡಿಸಿಕೊಂಡಿದ್ದಾರೆ.ಅಮೃತ(38),ಅಶ್ವಿನಿ(28) ಹಾಗೂ ಶೃತಿ (26) ಬಂಧಿತ ಆರೋಪಿಗಳು.

ಕುವೆಂಪುನಗರದ ಎ& ಬಿ ಬ್ಲಾಕ್ ನ ನಿವಾಸಿ ಪೂರ್ಣಿಮ ರವರು ತಮ್ಮ ಮಗಳ ಮದುವೆಗಾಗಿ 150 ಗ್ರಾಂ ಚಿನ್ನಾಭರಣ,20 ಸಾವಿರ ನಗದು ಇಟ್ಟಿದ್ದರು.ಪ್ರತಿದಿನ ಸ್ಕೂಟರ್ ರೈಡಿಂಗ್ ಕಲಿಯಲು ಮೊದಲ ಆರೋಪಿ ಅಮೃತ ಬಳಿ ಹೋಗುತ್ತಿದ್ದರು.ಅಮೃತ ಮನೆಗೇ ಬಂದು ಪೂರ್ಣಿಮಾರನ್ನ ಪಿಕ್ ಮಾಡುತ್ತಿದ್ದರು.ಮನೆಯಲ್ಲಿ ಒಡವೆಗಳು ಇರುವುದನ್ನ ಪತ್ತೆಹಚ್ಚಿದ ಅಮೃತ ತನ್ನ ಸ್ನೇಹಿತೆಯರೊಂದಿಗೆ ಸ್ಕೆಚ್ ಹಾಕಿ ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದಳು.ಬ್ಯೂಟಿಷಿಯನ್ ಅಶ್ವಿನಿ ಹಾಗೂ ಮನೆಗೆಲಸ ಮಾಡುವ ಶೃತಿ ಜೊತೆ ಸೇರಿಕೊಂಡು ನಕಲಿ ಬೀಗ ಸಿದ್ದಪಡಿಸಿ ಡಿಸೆಂಬರ್ 31 ರಂದು 150 ಗ್ರಾಂ ಚಿನ್ನ ಹಾಗೂ 12 ಸಾವಿರ ನಗದು ಕಳುವು ಮಾಡಿದ್ದಾರೆ.ಪೂರ್ಣಿಮ ರವರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಡಿಸಿಪಿ ಎಂ.ಎಸ್.ಗೀತಾ ರವರ ಮಾರ್ಗದರ್ಶನದಲ್ಲಿ,ಎಸಿಪಿ ಗಂಗಾಧರಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಕು.ರಾಧಾ,ಎಎಸ್ಸೈ ಮಹದೇವ ಹಾಗೂ ಸಿಬ್ಬಂದಿಗಳಾದ ಮಂಜುನಾಥ್,ಪುಟ್ಟಪ್ಪ,ನಾಗೇಶ್,ಯೋಗೇಶ್,ಹಜರತ್,ಸುರೇಶ್,ಮಾದೇಶ,ಮಹಿಳಾ ಸಿಬ್ಬಂದಿಗಳಾದ ಮಂಜುಳಾ,ಅಭಿಲಾಷ,ಅಶ್ವಿನಿ,ಕೃಷ್ಣವೇಣಿ,ಸೌಭಾಗ್ಯ ರವರು ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುವೆಂಪುನಗರ ಠಾಣೆ ಪೊಲೀಸರ ಈ ಪತ್ತೆ ಕಾರ್ಯವನ್ನ ನಗರ ಪೊಲೀಸ್ ಆಯುಕ್ತರಾದ ಬಿ.ರಮೇಶ್,ಹಾಗೂ ಡಿಸಿಪಿ ಮುತ್ತುರಾಜ್ ರವರು ಪ್ರಶಂಸಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *