ಸ್ಕೂಟರ್ ಟ್ರೈನಿಂಗ್ ನೆಪದಲ್ಲಿ ಕೈಚಳಕ…ಟ್ರೈನರ್,ಬ್ಯೂಟಿಷಿಯನ್ ಸೇರಿದಂತೆ ಮೂವರು ಕತರ್ ನಾಕ್ ಕಳ್ಳಿಯರ ಬಂಧನ…7.5 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸ್ಕೂಟರ್ ಟ್ರೈನಿಂಗ್ ನೆಪದಲ್ಲಿ ಕೈಚಳಕ…ಟ್ರೈನರ್,ಬ್ಯೂಟಿಷಿಯನ್ ಸೇರಿದಂತೆ ಮೂವರು ಕತರ್ ನಾಕ್ ಕಳ್ಳಿಯರ ಬಂಧನ…7.5 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಸ್ಕೂಟರ್ ಟ್ರೈನಿಂಗ್ ನೆಪದಲ್ಲಿ ಕೈಚಳಕ…ಟ್ರೈನರ್,ಬ್ಯೂಟಿಷಿಯನ್ ಸೇರಿದಂತೆ ಮೂವರು ಕತರ್ ನಾಕ್ ಕಳ್ಳಿಯರ ಬಂಧನ…7.5 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಜ3,Tv10 ಕನ್ನಡ
ಸ್ಕೂಟರ್ ರೈಡಿಂಗ್ ತರಬೇತಿ ನೀಡುವ ನೆಪದಲ್ಲಿ ಚಿನ್ನಾಭರಣ ದೋಚಿದ ಮೂವರು ಖತರ್ ನಾಕ್ ಕಳ್ಳಿಯರು ಮೈಸೂರು ಕುವೆಂಪುನಗರ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.ಬಂಧಿತರಿಂದ 7.5 ಲಕ್ಷ ಮೌಲ್ಯದ 150 ಗ್ರಾಂ ಚಿನ್ನಾಭರಣ,12 ಸಾವಿರ ನಗದು,ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೂರು ಮೊಬೈಲ್ ಗಳನ್ನ ವಶಪಡಿಸಿಕೊಂಡಿದ್ದಾರೆ.ಅಮೃತ(38),ಅಶ್ವಿನಿ(28) ಹಾಗೂ ಶೃತಿ (26) ಬಂಧಿತ ಆರೋಪಿಗಳು.

ಕುವೆಂಪುನಗರದ ಎ& ಬಿ ಬ್ಲಾಕ್ ನ ನಿವಾಸಿ ಪೂರ್ಣಿಮ ರವರು ತಮ್ಮ ಮಗಳ ಮದುವೆಗಾಗಿ 150 ಗ್ರಾಂ ಚಿನ್ನಾಭರಣ,20 ಸಾವಿರ ನಗದು ಇಟ್ಟಿದ್ದರು.ಪ್ರತಿದಿನ ಸ್ಕೂಟರ್ ರೈಡಿಂಗ್ ಕಲಿಯಲು ಮೊದಲ ಆರೋಪಿ ಅಮೃತ ಬಳಿ ಹೋಗುತ್ತಿದ್ದರು.ಅಮೃತ ಮನೆಗೇ ಬಂದು ಪೂರ್ಣಿಮಾರನ್ನ ಪಿಕ್ ಮಾಡುತ್ತಿದ್ದರು.ಮನೆಯಲ್ಲಿ ಒಡವೆಗಳು ಇರುವುದನ್ನ ಪತ್ತೆಹಚ್ಚಿದ ಅಮೃತ ತನ್ನ ಸ್ನೇಹಿತೆಯರೊಂದಿಗೆ ಸ್ಕೆಚ್ ಹಾಕಿ ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದಳು.ಬ್ಯೂಟಿಷಿಯನ್ ಅಶ್ವಿನಿ ಹಾಗೂ ಮನೆಗೆಲಸ ಮಾಡುವ ಶೃತಿ ಜೊತೆ ಸೇರಿಕೊಂಡು ನಕಲಿ ಬೀಗ ಸಿದ್ದಪಡಿಸಿ ಡಿಸೆಂಬರ್ 31 ರಂದು 150 ಗ್ರಾಂ ಚಿನ್ನ ಹಾಗೂ 12 ಸಾವಿರ ನಗದು ಕಳುವು ಮಾಡಿದ್ದಾರೆ.ಪೂರ್ಣಿಮ ರವರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಡಿಸಿಪಿ ಎಂ.ಎಸ್.ಗೀತಾ ರವರ ಮಾರ್ಗದರ್ಶನದಲ್ಲಿ,ಎಸಿಪಿ ಗಂಗಾಧರಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಕು.ರಾಧಾ,ಎಎಸ್ಸೈ ಮಹದೇವ ಹಾಗೂ ಸಿಬ್ಬಂದಿಗಳಾದ ಮಂಜುನಾಥ್,ಪುಟ್ಟಪ್ಪ,ನಾಗೇಶ್,ಯೋಗೇಶ್,ಹಜರತ್,ಸುರೇಶ್,ಮಾದೇಶ,ಮಹಿಳಾ ಸಿಬ್ಬಂದಿಗಳಾದ ಮಂಜುಳಾ,ಅಭಿಲಾಷ,ಅಶ್ವಿನಿ,ಕೃಷ್ಣವೇಣಿ,ಸೌಭಾಗ್ಯ ರವರು ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುವೆಂಪುನಗರ ಠಾಣೆ ಪೊಲೀಸರ ಈ ಪತ್ತೆ ಕಾರ್ಯವನ್ನ ನಗರ ಪೊಲೀಸ್ ಆಯುಕ್ತರಾದ ಬಿ.ರಮೇಶ್,ಹಾಗೂ ಡಿಸಿಪಿ ಮುತ್ತುರಾಜ್ ರವರು ಪ್ರಶಂಸಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *