ಅನಿಲ ಸೋರಿಕೆ:ಅಗ್ನಿಶಾಮಕ ಸಿಬ್ಬಂದಿ ಕ್ವಾರ್ಟರ್ಸ್ ನಲ್ಲಿ ಬೆಂಕಿ…6 ಮಂದಿಗೆ ಗಾಯ…

ಅನಿಲ ಸೋರಿಕೆ:ಅಗ್ನಿಶಾಮಕ ಸಿಬ್ಬಂದಿ ಕ್ವಾರ್ಟರ್ಸ್ ನಲ್ಲಿ ಬೆಂಕಿ…6 ಮಂದಿಗೆ ಗಾಯ…

ಅನಿಲ ಸೋರಿಕೆ:ಅಗ್ನಿಶಾಮಕ ಸಿಬ್ಬಂದಿ ಕ್ವಾರ್ಟರ್ಸ್ ನಲ್ಲಿ ಬೆಂಕಿ…6 ಮಂದಿಗೆ ಗಾಯ…

ಮೈಸೂರು,ಜ4,Tv10 ಕನ್ನಡ
ಮೈಸೂರಿನ ಬನ್ನಿಮಂಟಪದಲ್ಲಿರುವ ಅಗ್ನಿಶಾಮಕ ಸಿಬ್ಬಂದಿಗಳ ವಸತಿ ನಿಲಯದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ

ಗಾಯಗೊಂಡಿದ್ದಾರೆ.ಒಂದೇ ಮನೆಯ ನಾಲ್ವರು ಹಾಗೂ ನೆರೆಮನೆಯ ಇಬ್ಬರು ಗಾಯಗೊಂಡಿದ್ದಾರೆ.ಫೈರ್ ಮನ್ ಮಹದೇವಪ್ಪ ರವರ ಮನೆಯಲ್ಲಿ ಅವಘಢ ನಡೆದಿದೆ.ಬೆಳಿಗ್ಗೆ ಕಾಫಿ ಮಾಡಲು ಸ್ಟೌ ಹತ್ತಿಸುವಾಗ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಮನೆ

ವ್ಯಾಪಿಸಿದೆ.ಘಟನೆಯಲ್ಲಿ ಮಹದೇವ(36)ಇವರ ಪತ್ನಿ ಗೀತಾ(32) ಮಕ್ಕಳಾದ ಮೌನಶ್ರೀ(10)ಮಿಥುನ(5) ಹಾಗೂ ನೆರೆಮನೆಯವರಾದ ಸವಿತಾ ಮತ್ತು ಭಾಗ್ಯಮ್ಮ ಗಾಯಗೊಂಡಿದ್ದಾರೆ.ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಬೆಂಕಿ ಆವಘಢ ಸಂಭವಿಸುತ್ತಿದ್ದಂತೆಯೇ

ಕಾರ್ಯೋನ್ಮುಖರಾದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮನೆಯ ಪೀಠೋಪಕರಣಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.ಅನಿಲ ಸೋರಿಕೆ ಬೆಂಕಿ ಅವಘಢಕ್ಕೆ ಕಾರಣ

ಎನ್ನಲಾಗಿದೆ.ಎನ್.ಆರ್.ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *