ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರು,ಜ6,Tv10 ಕನ್ನಡ
ಮೈಸೂರು ನಗರದ ನಾಲ್ವರು ರೌಡಿ ಶೀಟರ್ ಗಳಿಗೆ ಪೊಲೀಸ್ ಆಯುಕ್ತರಾದ ಬಿ.ರಮೇಶ್ ರವರು ಗಡಿಪಾರು ಆದೇಶ ಹೊರಡಿಸಿದ್ದಾರೆ.ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಇವರಿಗೆ ಮುಂದಿನ 6 ತಿಂಗಳವರೆಗೆ ಗಡಿಪಾರು ಶಿಕ್ಷೆ ಅನ್ವಯಿಸಲಿದೆ.

ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸತೀಶ್ ಗೆ 6 ತಿಂಗಳ ಅವಧಿಯವರೆಗೆ ಚಾಮರಾಜನಗರ ಜಿಲ್ಲೆಗೆ,ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಧುಸೂಧನ್.@.ಪಾರ್ಟಿ ಗೆ 6 ತಿಂಗಳ ಅವಧಿಯವರೆಗೆ ಹಾಸನ ಜಿಲ್ಲೆಗೆ,ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಮಂಜುನಾಥ್.@.ಗೆಂಡೆ ಮಂಜ ಗೆ 6 ತಿಂಗಳ ಕಾಲ ಕೊಡಗು ಜಿಲ್ಲೆಗೆ ಹಾಗೂ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಕುಮಾರ.@.ಕಪಾಲಿ ಗೆ 6 ತಿಂಗಳ ಕಾಲ ಚಿತ್ರದುರ್ಗ ಜಿಲ್ಲೆಗೆ ಗಡಿಪಾರು ಮಾಡುವಂತೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶಿಸಿದ್ದಾರೆ.

ಸದರಿ ರೌಡಿ ಶೀಟರ್ ಗಳ ಮೇಲೆ ರೌಡಿ ಹಾಳೆ ತೆಗೆದಿದ್ದರೂ ಮೈಸೂರಿನ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವ ಹಿನ್ನಲೆ ಆಯುಕ್ತರು ಕಠಿಣ ಕ್ರಮ ಕೈಗೊಂಡಿದ್ದಾರೆ.ಸಮಾಕದ ಸ್ವಾಸ್ಥ್ಯ ಕದಡುವುದು,ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವುದು,ಗೂಂಡಾ ವರ್ತನೆ,ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಹಿನ್ನಲೆ ಗಡಿಪಾರು ಶಿಕ್ಷೆ ವಿಧಿಸಿದ್ದಾರೆ.ಸಾರ್ವಜನಿಕರ ಆಸ್ತಿಪಾಸ್ತಿಗೆ ಧಕ್ಕೆ ತರುವ ಸಂಭವ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆವಕ್ರಮವಾಗಿ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಮುಂದಿನ 6 ತಿಂಗಳ ಕಾಲ ನಾಲ್ವರು ರೌಡಿ ಶೀಟರ್ ಗಳು ಮೈಸೂರನ್ನ ಪ್ರವೇಶಿಸದಂತೆ ಎಚ್ಚರಿಕೆ ನೀಡಲಾಗಿದೆ.

ಇಂತಹ ಚಟುವಟಿಕೆಗಳಲ್ಲಿ ಯಾವುದೇ ರೌಡಿ ಶೀಟರ್ ಗಳು ಭಾಗಿಯಾಗುವ ಸೂಚನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಎಚ್ಚರಿಕೆ ನೀಡಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *