ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರು,ಜ6,Tv10 ಕನ್ನಡ
ಮೈಸೂರು ನಗರದ ನಾಲ್ವರು ರೌಡಿ ಶೀಟರ್ ಗಳಿಗೆ ಪೊಲೀಸ್ ಆಯುಕ್ತರಾದ ಬಿ.ರಮೇಶ್ ರವರು ಗಡಿಪಾರು ಆದೇಶ ಹೊರಡಿಸಿದ್ದಾರೆ.ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಇವರಿಗೆ ಮುಂದಿನ 6 ತಿಂಗಳವರೆಗೆ ಗಡಿಪಾರು ಶಿಕ್ಷೆ ಅನ್ವಯಿಸಲಿದೆ.

ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸತೀಶ್ ಗೆ 6 ತಿಂಗಳ ಅವಧಿಯವರೆಗೆ ಚಾಮರಾಜನಗರ ಜಿಲ್ಲೆಗೆ,ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಧುಸೂಧನ್.@.ಪಾರ್ಟಿ ಗೆ 6 ತಿಂಗಳ ಅವಧಿಯವರೆಗೆ ಹಾಸನ ಜಿಲ್ಲೆಗೆ,ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಮಂಜುನಾಥ್.@.ಗೆಂಡೆ ಮಂಜ ಗೆ 6 ತಿಂಗಳ ಕಾಲ ಕೊಡಗು ಜಿಲ್ಲೆಗೆ ಹಾಗೂ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಕುಮಾರ.@.ಕಪಾಲಿ ಗೆ 6 ತಿಂಗಳ ಕಾಲ ಚಿತ್ರದುರ್ಗ ಜಿಲ್ಲೆಗೆ ಗಡಿಪಾರು ಮಾಡುವಂತೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶಿಸಿದ್ದಾರೆ.

ಸದರಿ ರೌಡಿ ಶೀಟರ್ ಗಳ ಮೇಲೆ ರೌಡಿ ಹಾಳೆ ತೆಗೆದಿದ್ದರೂ ಮೈಸೂರಿನ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವ ಹಿನ್ನಲೆ ಆಯುಕ್ತರು ಕಠಿಣ ಕ್ರಮ ಕೈಗೊಂಡಿದ್ದಾರೆ.ಸಮಾಕದ ಸ್ವಾಸ್ಥ್ಯ ಕದಡುವುದು,ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವುದು,ಗೂಂಡಾ ವರ್ತನೆ,ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಹಿನ್ನಲೆ ಗಡಿಪಾರು ಶಿಕ್ಷೆ ವಿಧಿಸಿದ್ದಾರೆ.ಸಾರ್ವಜನಿಕರ ಆಸ್ತಿಪಾಸ್ತಿಗೆ ಧಕ್ಕೆ ತರುವ ಸಂಭವ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆವಕ್ರಮವಾಗಿ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಮುಂದಿನ 6 ತಿಂಗಳ ಕಾಲ ನಾಲ್ವರು ರೌಡಿ ಶೀಟರ್ ಗಳು ಮೈಸೂರನ್ನ ಪ್ರವೇಶಿಸದಂತೆ ಎಚ್ಚರಿಕೆ ನೀಡಲಾಗಿದೆ.

ಇಂತಹ ಚಟುವಟಿಕೆಗಳಲ್ಲಿ ಯಾವುದೇ ರೌಡಿ ಶೀಟರ್ ಗಳು ಭಾಗಿಯಾಗುವ ಸೂಚನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಎಚ್ಚರಿಕೆ ನೀಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *