ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರು,ಜ6,Tv10 ಕನ್ನಡ
ಮೈಸೂರು ನಗರದ ನಾಲ್ವರು ರೌಡಿ ಶೀಟರ್ ಗಳಿಗೆ ಪೊಲೀಸ್ ಆಯುಕ್ತರಾದ ಬಿ.ರಮೇಶ್ ರವರು ಗಡಿಪಾರು ಆದೇಶ ಹೊರಡಿಸಿದ್ದಾರೆ.ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಇವರಿಗೆ ಮುಂದಿನ 6 ತಿಂಗಳವರೆಗೆ ಗಡಿಪಾರು ಶಿಕ್ಷೆ ಅನ್ವಯಿಸಲಿದೆ.

ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸತೀಶ್ ಗೆ 6 ತಿಂಗಳ ಅವಧಿಯವರೆಗೆ ಚಾಮರಾಜನಗರ ಜಿಲ್ಲೆಗೆ,ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಧುಸೂಧನ್.@.ಪಾರ್ಟಿ ಗೆ 6 ತಿಂಗಳ ಅವಧಿಯವರೆಗೆ ಹಾಸನ ಜಿಲ್ಲೆಗೆ,ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಮಂಜುನಾಥ್.@.ಗೆಂಡೆ ಮಂಜ ಗೆ 6 ತಿಂಗಳ ಕಾಲ ಕೊಡಗು ಜಿಲ್ಲೆಗೆ ಹಾಗೂ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಕುಮಾರ.@.ಕಪಾಲಿ ಗೆ 6 ತಿಂಗಳ ಕಾಲ ಚಿತ್ರದುರ್ಗ ಜಿಲ್ಲೆಗೆ ಗಡಿಪಾರು ಮಾಡುವಂತೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶಿಸಿದ್ದಾರೆ.

ಸದರಿ ರೌಡಿ ಶೀಟರ್ ಗಳ ಮೇಲೆ ರೌಡಿ ಹಾಳೆ ತೆಗೆದಿದ್ದರೂ ಮೈಸೂರಿನ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವ ಹಿನ್ನಲೆ ಆಯುಕ್ತರು ಕಠಿಣ ಕ್ರಮ ಕೈಗೊಂಡಿದ್ದಾರೆ.ಸಮಾಕದ ಸ್ವಾಸ್ಥ್ಯ ಕದಡುವುದು,ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವುದು,ಗೂಂಡಾ ವರ್ತನೆ,ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಹಿನ್ನಲೆ ಗಡಿಪಾರು ಶಿಕ್ಷೆ ವಿಧಿಸಿದ್ದಾರೆ.ಸಾರ್ವಜನಿಕರ ಆಸ್ತಿಪಾಸ್ತಿಗೆ ಧಕ್ಕೆ ತರುವ ಸಂಭವ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆವಕ್ರಮವಾಗಿ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಮುಂದಿನ 6 ತಿಂಗಳ ಕಾಲ ನಾಲ್ವರು ರೌಡಿ ಶೀಟರ್ ಗಳು ಮೈಸೂರನ್ನ ಪ್ರವೇಶಿಸದಂತೆ ಎಚ್ಚರಿಕೆ ನೀಡಲಾಗಿದೆ.

ಇಂತಹ ಚಟುವಟಿಕೆಗಳಲ್ಲಿ ಯಾವುದೇ ರೌಡಿ ಶೀಟರ್ ಗಳು ಭಾಗಿಯಾಗುವ ಸೂಚನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಎಚ್ಚರಿಕೆ ನೀಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *