ಸೈಬರ್ ಕ್ರೈಂ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ…

ಸೈಬರ್ ಕ್ರೈಂ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ…

ಸೈಬರ್ ಕ್ರೈಂ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ…

ಮೈಸೂರು,ಜ06,Tv10 ಕನ್ನಡ
ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್ ಕ್ರೈಮ್ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಕೆಪಿಎ ಪೊಲೀಸ್ ಉಪಾಧೀಕ್ಷಕರು ಎಚ್ ಎಸ್ ರೇಣುಕಾರಾಧ್ಯ ಕಿವಿ ಮಾತು ಹೇಳಿದರು. ಸರಸ್ವತಿಪುರಂನಲ್ಲಿರುವ ಟಿ ಟಿಎಲ್ ಕಾಲೇಜ್ ಆವರಣದಲ್ಲಿ
ಟಿ.ಟಿ.ಎಲ್ ಟ್ರಸ್ಟ್ ಮತ್ತು ಅಖಿಲಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಟಿ.ಟಿ.ಎಲ್ ವಾಣಿಜ್ಯ ವ್ಯವಹಾರ ನಿರ್ವಹಣಾ ಕಾಲೇಜು ,ಟಿ.ಟಿ.ಎಲ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕ ಆಯೋಜಿಸಿರುವ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚೆಗೆ ಅಂತರ್ಜಾಲದ ದುರುಪಯೋಗ ಹೆಚ್ಚಾಗುತ್ತಿದೆ.ಜನರು ಒಂದು ಸಣ್ಣ ತಪ್ಪಿನಿಂದಾಗಿ ಹಣ ಹಾಗೂ ಮಹತ್ವದ ಮಾಹಿತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಮೂಲಕ ತಿಳಿದೋ ಅಥವಾ ತಿಳಿಯದೆಯೋ ವಿವಿಧ ಸಂಕಷ್ಟಗಳಿಗೆ ಸಿಲುಕಿ ನಲುಗುತ್ತಿದ್ದಾರೆ.
ಸೈಬರ್ ಕ್ರೈಂ ತಡೆಯುವ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅತ್ಯಗತ್ಯ.ಸರ್ಕಾರಿ ಸಂಸ್ಥೆಗಳಲ್ಲೂ ಸಹ ಪ್ರತೀ ಕೆಲಸದಲ್ಲಿಯೂ ಕಂಪ್ಯೂಟರ್, ವಾಟ್‌ಸ್‌ಆಫ್, ಪೇಸ್ಬುಕ್ ಹೀಗೆ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತೇವೆ. ಆದ್ದರಿಂದ ಈ ಬಗ್ಗೆ ತಿಳಿದುಕೊಳ್ಳಬೇಕು ಮತ್ತು ಜಾಗೃತರಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಟಿ.ಟಿ.ಎಲ್ ಟ್ರಸ್ಟ್ ನ ಆಡಳಿತ ಮತ್ತು ನಿಯೋಜನ ಅಧಿಕಾರಿ ಡಾಕ್ಟರ್ ಬಿ ವಿ ಪ್ರಶಾಂತ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷರಾದ ಡಾ ಜಿ ವಿ ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಎಸ್ ಆರ್, ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬ್ರಹ್ಮರಾಂಭ ಎಸ್,
ಕಾಲೇಜಿನ ರೆಡ್ ಕ್ರಾಸ್ ಅಧಿಕಾರಿ ಗಿರೀಶ್ ಹಾಗೂ ಇನ್ನಿತರರು ಭಾಗವಹಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *