ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಮೈಸೂರು,ಜ11,Tv10 ಕನ್ನಡ
ಜನವರಿ 15 ರಂದು ಬೆಳಿಗ್ಗೆ 8 ಗಂಟೆಯಿಂದ ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಇರುವ ರೇಸ್ ಕೋರ್ಸ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ.80 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ಯಶಸ್ಸಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾಮತನಾಡಿದರು. ಜ 80 ಸಾವಿರ ಜನ ಭಾಗವಹಿಸುವಂತೆ ಗುರಿ ನಿಗದಿಯಾಗಿದ್ದು, www.yogathon2022.com ನಲ್ಲಿ ನೊಂದಣಿ ಮಾಡಿಕೊಂಡು ನೀಡಲಾಗುವ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿಸಿ ಜನವರಿ 15 ರಂದು ಯೋಗಾಥಾನ್ ಗೆ ಪ್ರವೇಶಿಸುವ ವ್ಯವಸ್ಥೆ ಮಾಡಲಾಗಿದೆ.
ಶಾಲಾ, ಕಾಲೇಜು, ವಸತಿ ಶಾಲೆಗಳಿಂದ ನೊಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಕರೆದುಕೊಂಡು ‌ಬರುವ ವ್ಯವಸ್ಥೆ ಮಾಡಿ ಎಂದು ತಿಳಿಸಿದ್ದಾರೆ.
ಪಾರ್ಕಿಂಗ್, ಕುಡಿಯುವ ನೀರು, ಶೌಚಾಲಯ, ವೇದಿಕೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಿ ಜವಾಬ್ದಾರಿಗಳನ್ನು ವಹಿಸಿ, ಎಂಟ್ರಿ ಗೇಟ್ ಗಳ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದರು.ಶಿಷ್ಠಾಚಾರ, ಭದ್ರತೆ ಹಾಗೂ ಸಾರಿಗೆ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮವಹಿಸಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ವೇದಿಕೆ, ಸ್ವಚ್ಚತೆ , ಉಪಹಾರ ಹಾಗೂ ಆಂಬುಲೆನ್ಸ್ ವ್ಯವಸ್ಧೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಆದಷ್ಟು ಚಿಕ್ಕ ಮಕ್ಕಳು ಯೋಗ ಕಾರ್ಯಕ್ರಮಕ್ಕೆ ಭಾಗವಹಿಸದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್ .ಲೋಕನಾಥ್ , ಯುವಜನ‌ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಜಿಲ್ಲಾ ಆಯುಷ್ ಅಧಿಕಾರಿ ಡಾ ಪುಷ್ಪ್ ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಹರೀಶ್ ಟಿ.ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *