ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಮೈಸೂರು,ಜ11,Tv10 ಕನ್ನಡ
ಜನವರಿ 15 ರಂದು ಬೆಳಿಗ್ಗೆ 8 ಗಂಟೆಯಿಂದ ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಇರುವ ರೇಸ್ ಕೋರ್ಸ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ.80 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ಯಶಸ್ಸಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾಮತನಾಡಿದರು. ಜ 80 ಸಾವಿರ ಜನ ಭಾಗವಹಿಸುವಂತೆ ಗುರಿ ನಿಗದಿಯಾಗಿದ್ದು, www.yogathon2022.com ನಲ್ಲಿ ನೊಂದಣಿ ಮಾಡಿಕೊಂಡು ನೀಡಲಾಗುವ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿಸಿ ಜನವರಿ 15 ರಂದು ಯೋಗಾಥಾನ್ ಗೆ ಪ್ರವೇಶಿಸುವ ವ್ಯವಸ್ಥೆ ಮಾಡಲಾಗಿದೆ.
ಶಾಲಾ, ಕಾಲೇಜು, ವಸತಿ ಶಾಲೆಗಳಿಂದ ನೊಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಕರೆದುಕೊಂಡು ‌ಬರುವ ವ್ಯವಸ್ಥೆ ಮಾಡಿ ಎಂದು ತಿಳಿಸಿದ್ದಾರೆ.
ಪಾರ್ಕಿಂಗ್, ಕುಡಿಯುವ ನೀರು, ಶೌಚಾಲಯ, ವೇದಿಕೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಿ ಜವಾಬ್ದಾರಿಗಳನ್ನು ವಹಿಸಿ, ಎಂಟ್ರಿ ಗೇಟ್ ಗಳ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದರು.ಶಿಷ್ಠಾಚಾರ, ಭದ್ರತೆ ಹಾಗೂ ಸಾರಿಗೆ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮವಹಿಸಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ವೇದಿಕೆ, ಸ್ವಚ್ಚತೆ , ಉಪಹಾರ ಹಾಗೂ ಆಂಬುಲೆನ್ಸ್ ವ್ಯವಸ್ಧೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಆದಷ್ಟು ಚಿಕ್ಕ ಮಕ್ಕಳು ಯೋಗ ಕಾರ್ಯಕ್ರಮಕ್ಕೆ ಭಾಗವಹಿಸದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್ .ಲೋಕನಾಥ್ , ಯುವಜನ‌ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಜಿಲ್ಲಾ ಆಯುಷ್ ಅಧಿಕಾರಿ ಡಾ ಪುಷ್ಪ್ ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಹರೀಶ್ ಟಿ.ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *