
ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…
- MysoreTV10 Kannada Exclusive
- January 13, 2023
- No Comment
- 181

ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…
ಮಂಡ್ಯ,ಜ13,Tv10 ಕನ್ನಡ
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರು ಸೂಚಿಸಿದೆ.ರಾಜಕೀಯ ಭವಿಷ್ಯ ನುಡಿದಿರುವ ಮನೆ ದೇವರು
ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಸೂಚನೆ ನೀಡಿದೆ.
ಆದಿನಾಡು ಚಿಕ್ಕಮ್ಮ ದೇವಿ ತಾಯಿಯಿಂದ ಸಿದ್ದು ಪುತ್ರ ಡಾ ಯತೀಂದ್ರಗೆ ಸೂಚನೆ ನೀಡಿದೆ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ
ಆದಿ ನಾಡು ಚಿಕ್ಕಮ್ಮತಾಯಿ ಭವಿಷ್ಯ ನುಡಿದಿದೆ.
ಸಿದ್ದರಾಮಯ್ಯ ಕುಟುಂಬದ ಮೂಲ ದೇವತೆ ಬಳಿಗೆ ಡಾ.ಯತೀಂದ್ರ ಸಿದ್ದರಾಮಯ್ಯ ಬಂದ ವೇಳೆ ಇಂತಹ ಸೂಚನೆ ನೀಡಿದೆ.
ನಿಮಗೆ ಪ್ರಬಲ ಶಕ್ತಿಗಳ ವಿರೋಧ ಇದೆ.
ಒಂದು ಕಡೆ ಬಾಹುಬಲ ಚಾಚಿದ್ರೆ ಆಗಲ್ಲ.
ಅರ್ಥ ಆಯ್ತೇನಪ್ಪ.
ಬಾಹುಬಲ ಎರಡು ಕಡೆ ಚಾಚಬೇಕು.
ಒಂದು ಕಡೆ ಚಾಚಿದ್ರೆ ತಪ್ಪಾಗುತ್ತೆ, ಅರ್ಥ ಮಾಡ್ಕೊಳ್ಳಿ.ಎರಡು ಕಡೆ ಚಾಚಿದ್ರೆ ನಾನು ಗೆಲ್ಲಿಸಿಕೊಂಡು ಬರ್ತಿನಿ ಎಂದು ನುಡಿದಿದೆ.
ನಾನು ನಿಮ್ಮ ಮನೆ ದೇವತೆ ಗೊತ್ತಾ.
ನಾನು ಮೂಲದೇವರು,
ಬೇಕಾದ್ರೆ ಅವಕಾಶ ಸಿಕ್ಕಿದ್ರೆ ಯಾವಾಗಾದ್ರು ಬಂದು ನನ್ನ ಆಶೀರ್ವಾದ ತೆಗೆದುಕೊಂಡು ಹೋಗಲು ಹೇಳು.
ದೇವಾಲಯದ ಅರ್ಚಕ ಡಾ. ಲಿಂಗಣ್ಣ ಮೈ ಮೇಲೆ ಬಂದ ಶಕ್ತಿ ದೇವತೆಯಿಂದ ಸೂಚನೆ ಬಂದಿದೆ.
ಸಿದ್ದು ಪುತ್ರ ಡಾ.ಯತೀಂದ್ರ ಅವರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸುವ ವೇಳೆ ಸೂಚನೆ ದೊರೆತಿದೆ.
ಮೂಲ ಮನೆ ದೇವರ ಸೂಚನೆಯಂತೆ ಎರಡು ಕ್ಷೇತ್ರದಲ್ಲಿ ಸಿದ್ದು ಸಗಪರ್ಧಿಸುತ್ತಾರಾ..? ಎಂಬ ಪ್ರಶ್ನೆ ಉದ್ಭವಿಸಿದೆ.
ಸಧ್ಯ ದೇವರ ಸೂಚನೆ ಚರ್ಚೆಗೆ ಗ್ರಾಸವಾಗಿದೆ…