ಸ್ಯಾಂಟ್ರೋ ರವಿ ಅಂದರ್…ಗುಜರಾತ್ ನಲ್ಲಿ ಸಿಕ್ಕಿಬಿದ್ದ ಆರೋಪಿ…

ಸ್ಯಾಂಟ್ರೋ ರವಿ ಅಂದರ್…ಗುಜರಾತ್ ನಲ್ಲಿ ಸಿಕ್ಕಿಬಿದ್ದ ಆರೋಪಿ…

  • Crime
  • January 13, 2023
  • No Comment
  • 165

ಸ್ಯಾಂಟ್ರೋ ರವಿ ಅಂದರ್…ಗುಜರಾತ್ ನಲ್ಲಿ ಸಿಕ್ಕಿಬಿದ್ದ ಆರೋಪಿ…

ಮೈಸೂರು,ಜ13,Tv10 ಕನ್ನಡ
ಮೈಸೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ.
ಗುಜರಾತಿನ ಅಹಮದಾಬಾದ್ ನಗರದಲ್ಲಿ ಸ್ಯಾಂಟ್ರೋರವಿ ಸಿಕ್ಕಿಬಿದ್ದಿದ್ದಾನೆ.ಎಡಿಜಿಪಿ ಅಲೋಕ್ ಕುಮಾರ್ ರವರು ಇಂದು ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಅರೆಸ್ಟ್ ಆದ ಮಾಹಿತಿ ನೀಡಿದ್ದಾರೆ.
ಮೈಸೂರು ನಗರ ಪೊಲೀಸ್‌ರು ಗುಜರಾತ್ ಪೊಲೀಸರ ಸಹಕಾರದೊಂದಿಗೆ ಸ್ಯಾಂಟ್ರೋರವಿಯನ್ನ ಅರೆಸ್ಟ್ ಮಾಡಿದ್ದಾರೆ.
ದೂರು ದಾಖಲಾದ ಮೇಲೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚರಿಸಿದ್ದಾನೆ.
ನಾವು ಅವನನ್ನ ಪತ್ತೆ ಹಚ್ಚಲಿಕ್ಕೆ ಮುಂದಾದಾಗ ಬೇರೆ ರಾಜ್ಯಕ್ಕೆ ಹೋಗಿದ್ದಾನೆ.
ಈಗ ಗುಜರಾತ್ ನ್ಯಾಯಾಲಯದಲ್ಲಿ ಹಾಜರು ಪಡಿಸಿ ಅವರ ಅನುಮತಿ ಪಡೆದು ರಾಜ್ಯಕ್ಕೆ ಕರೆದುಕೊಂಡು ಬರುವುದಾಗಿ ಅಲೋಕ್ ಕುಮಾರ್ ತಿಳಿಸಿದ್ದಾರೆ.ಮೈಸೂರು ಬೆಂಗಳೂರು ಎರಡು ಕಡೆಗಳಲ್ಲಿ ಸ್ಯಾಂಟ್ರೋರವಿ ವಾಸವಿದ್ದ ಮನೆಗಳನ್ನ ಪರಿಶೀಲನೆ ಮಾಡಿದ್ದೀವಿ.ಇದಕ್ಕೆ ಸಂಬಂಧಿಸಿದಂತೆ ಒಡನಾಡಿ ಸಂಸ್ಥೆ, ಸಂತ್ರಸ್ತೆಯಿಂದ ಮಾಹಿತಿ ಪಡೆದಿದ್ದೆವು.

ಪೊಲೀಸರಿಂದ ತಪ್ಪಿಸಿಕೊಳ್ಳೊಕೆ ಮೊಬೈಲ್, ಸಿಮ್ ಬದಲಾವಣೆ ಮಾಡಿದ್ದಾನೆ.ಸ್ಥಳ ಬದಲಾವಣೆ ಮಾಡಿದ್ದಾನೆ.
ವಾಹನಗಳ ಬದಲಾವಣೆ ಮಾಡಿದ್ದಾನೆ.
ಇದ್ರಿಂದ ಪೊಲೀಸರಿಗೆ ಸ್ಯಾಂಟ್ರೋರವಿಯನ್ನ ಪತ್ತೆ ಹಚ್ಚಲಿಕ್ಕೆ ಕಷ್ಟ ಆಯ್ತು.ಅವನೊನ್ನ ಹಾರ್ಡ್ ಕ್ರಿಮಿನಲ್.
ಹಳೆಯ ಕ್ರಿಮಿನಲ್.
ಅವನು ಜೈಲಿನಲ್ಲಿದ್ದ.
ಅವನಿಗೆ ಈ ಬೆಳವಣಿಗೆಗಳೆಲ್ಲಾ ಗೊತ್ತಿತ್ತು.ಪರಾರಿಯಾದ ನಂತರ ಗುರುತು ಬದಲಿಸಿಕೊಂಡಿದ್ದ.ವಿಗ್ ತೆಗೆದು ಹಾಕಿ ಬದಲಾಗಿದ್ದ.ಎನ್.ಆರ್.ಠಾಣೆಯ ಇನ್ಸ್ಪೆಕ್ಟರ್ ಅಜರುದ್ದೀನ್ ಹಾಗೂ ಮೇಟಗಳ್ಳಿ ಇನ್ಸ್ ಪೆಕ್ಟರ್ ದಿವಾಕರ್ ರವರು ಆರೋಪಿಯ ಬಂಧನಕ್ಕೆ ಶ್ರಮಿಸಿರುವುದಾಗಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಗುಜರಾತ್ ನ ಅಹಮದಾಬಾದ್ ನಲ್ಲಿ ಮಂಜುನಾಥ್ ಕೆ ಎಸ್ @ ಸ್ಯಾಂಟ್ರೋರವಿ (51) ಜೊತೆಗೆ
ರಾಮ್ ಜೀ (45)
ಸತೀಶ್ ಕುಮಾರ್ (35) ರವರನ್ನೂ ಸಹ ಬಂಧಿಸಲಾಗಿದೆ ಎಂದು
ರಾಜ್ಯ ಎಡಿಜಿಪಿ ಅಲೋಕ್ ಕುಮಾರ್ ಮೈಸೂರಿನಲ್ಲಿ ತಿಳಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *