ಯುವತಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ…ಓರ್ವನಿಗೆ ಚಾಕು ಇರಿತ…ಮೂವರು ಅಂದರ್…

ಯುವತಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ…ಓರ್ವನಿಗೆ ಚಾಕು ಇರಿತ…ಮೂವರು ಅಂದರ್…

ಯುವತಿ ವಿಚಾರಕ್ಕೆ ಯುವಕರ ನಡುವೆ ಗಲಾಟೆ…ಓರ್ವನಿಗೆ ಚಾಕು ಇರಿತ…ಮೂವರು ಅಂದರ್…

ಮೈಸೂರು,ಜ23,Tv10 ಕನ್ನಡ
ಯುವತಿ ವಿಚಾರದಲ್ಲಿ ಯುವಕರ ಗುಂಪು ಗಲಾಟೆ ಮಾಡಿಕೊಂಡ ಘಟನೆ ಮೈಸೂರಿನ ವಿಜಯನಗರಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಲಾಟೆಯಲ್ಲಿ ಓರ್ವನಿಗೆ ಚಾಕುವಿನಿಂದ ಇರಿಯಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಚಾಕುವಿನಿಂದ ಇರಿದ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ.ಘಟನೆಯಲ್ಲಿ ಅಶಿತ್(37)ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಆಶಿತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.ಚಾಕುವಿನಿಂದ ಇರಿದ ಆರೋಪಿ ವಿನಾಯಕ ಹಾಗೂ ಇಬ್ಬರು ಸಹಚರರನ್ನ ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುಚಿತ್ ಓರ್ವ ಯುವತಿಯನ್ನ ಪ್ರೀತಿಸುತ್ತಿದ್ದ.20 ದಿನಗಳ ಹಿಂದೆ ಆರೋಪಿ ವಿನಾಯಕ ಯುವತಿಯ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದ.ಈ ಸಂಭಂಧ ಸುಚಿತ್ ಹಾಗೂ ವಿನಾಯಕ ನಡುವೆ ಗಲಾಟೆ ಆಗಿತ್ತು.ಈ ವಿಚಾರವನ್ನ ಸುಚಿತ್ ತನ್ನ ಸ್ನೇಹಿತ ಅಶಿತ್ ಗೆ ತಿಳಿಸಿದ್ದ.ಅಲ್ಲದೆ ಒಂದು ವಾರದ ಹಿಂದೆ ವಿನಾಯಕ್ ಗೆ ಹಲ್ಲೆ ನಡೆಸಿ ವಾರ್ನಿಂಗ್ ಕೊಟ್ಟಿದ್ದ.ಇಷ್ಟಾದ್ರೂ ಸುಮ್ಮನಾಗದ ವಿನಾಯಕ್ ನಿನ್ನೆ ಫೋನ್ ಮೂಲಕ ಸಂಪರ್ಕಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ ತನ್ನ ಮನೆಗೆ ಬರುವಂತೆ ಚಾಲೆಂಜ್ ಮಾಡಿದ್ದ.ವಿಜಯನಗರದಲ್ಲಿರುವ ವಿನಾಯಕ್ ಮನೆಗೆ ಆಶಿತ್ ಹೋಗಿದ್ದಾನೆ.ಈ ವೇಳೆ ಮಾತಿನ ಚಕಮಕಿ ನಡೆದಿದೆ.ಆಶಿತ್ ಗೆ ವಿನಾಯಕ್ ಹಾಗೂ ಇಬ್ಬರು ಸ್ನೇಹಿತರು ಚಾಕುವಿನಿಂದ ಇರಿದಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ವಿಜಯನಗರ ಠಾಣೆ ಪೊಲೀಸರು ವಿನಾಯಕ್ ಹಾಗೂ ಇಬ್ಬರು ಸಹಚರರನ್ನ ಬಂಧಿಸಿದ್ದಾರೆ.ಈ ಸಂಭಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *