ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

  • Crime
  • January 24, 2023
  • No Comment
  • 178

ಜಮೀನು ವಿವಾದ…ಮದ್ದೂರು ತಾಲೂಕು ಕಚೇರಿಯಲ್ಲಿ ಕೊಲೆ ಯತ್ನ…ಮೊಚ್ಚಿನಿಂದ ಮಾರಣಾಂತಿಕ ಹಲ್ಲೆ…

ಮದ್ದೂರು,ಜ24,Tv10 ಕನ್ನಡ
ಜಮೀನು ವಿವಾದ ಹಿನ್ನಲೆ ತಾಲೂಕು ಕಚೇರಿಯಲ್ಲಿ ಹತ್ಯೆಗೆ ಯತ್ನ ನಡೆಸಿದ ಘಟನೆ ಮದ್ದೂರಿನಲ್ಲಿ ನಡೆದಿದೆ.ತಹಶೀಲ್ದಾರ್ ಕೋರ್ಟ್ ಗೆ ಬಂದಿದ್ದಾಗ ಕೃತ್ಯ ನಡೆದಿದೆ.ಇಂದು ತಹಶೀಲ್ದಾರ್ ಕೋರ್ಟ್ ನಲ್ಲಿ ವಿಚಾರಣೆ ಇತ್ತು.
ನಂದನ್ ಕುಟುಂಬಕ್ಕೆ ಸೇರಿದ ಜಮೀನನ್ನ ಚೆನ್ನರಾಜು ಎಂಬುವರು ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದ ಪ್ರಕರಣ ಇತ್ತು.ಈ ಸಂಭಂಧ
ಚನ್ನರಾಜು ಮತ್ತು ನಂದನ್ ಕುಟುಂಬದ ನಡುವೆ ವೈಮಷ್ಯ ಇತ್ತು.
ಪ್ರಕರಣ ಸಂಬಂಧ ತಹಶೀಲ್ದಾರ್ ಕೋರ್ಟ್ ಮೆಟ್ಟಿಲೇರಿತ್ತು.ಜಮೀನು ಕಬಳಿಸಿದ ಆರೋಪದ ಹಿನ್ನೆಲೆ ಚನ್ನರಾಜು ಮೇಲೆ ನಂದನ್ ವೈಷಮ್ಯ ಬೆಳೆಸಿಕೊಂಡಿದ್ದ.
ಇಂದು ತಹಶೀಲ್ದಾರ್ ಕೋರ್ಟ್ ಬಳಿ ವಾದ-ವಿವಾದ ನಡೆದಿತ್ತು.ಮೊದಲೇ ಕುಡುಗೋಲು ತಂದಿದ್ದ ನಂದನ್
ಮೊದಲ ಮಹಡಿಯಲ್ಲಿರುವ ತಹಶೀಲ್ದಾರ್ ಕಚೇರಿಯಿಂದ ಮಚ್ಚಿನಿಂದ ದಾಳಿ ಮಾಡಿದ್ದಾನೆ. ಹಲ್ಲೆ ನಡೆಸುತ್ತಲೇ ಓಡಿಸಿಕೊಂಡು ಬಂದಿದ್ದಾನೆ.
ತಹಶೀಲ್ದಾರ್ ಕಚೇರಿ ಕೆಳಗಡೆ ಕಾಂಪೌಂಡ್ ಬಳಿ ಉರುಳಿ ಬಿದ್ದಾಗ ಮನಬಂದಂತೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಹಲ್ಲೆ ಮಾಡ್ತಿದ್ದ ನಂದನ್ ಮೇಲೆ ಸಾರ್ವಜನಿಕರು ಕಲ್ಲು ತೂರಿದ್ದಾರೆ.ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ನಂದನ್ ಗೂ ಮನಬಂದಂತೆ ಥಳಿಸಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *